ಗೋವಿಂದ ದಾಸ ಕಾಲೇಜು ಸುರತ್ಕಲ್ ಸುರತ್ಕಲ್ : ಶಿಕ್ಷಣ ಇವತ್ತು ವ್ಯಾಪಾರೀಕರಣವಾಗುತ್ತಿದೆ. ಶಿಕ್ಷಣದ ಮಹತ್ವ ಕುಂದುತ್ತಿದೆ ಎಂದು ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಇದರ ಸಹಾಯಕ ಪ್ರೋಫೆಸರ್ ಡಾ. ವರದೇಶ್ ಹಿರೇಗಂಗೆ ಅಭಿಪ್ರಾಯಪಟ್ಟರು. ಗೋವಿಂದ ದಾಸ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ನಿರ್ಮಾಣಗೊಂಡ `ಸ್ಟುಡಿಯೋ' ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣ, ಮಾಹಿತಿಗಳನ್ನು ಜನತೆಗೆ ನೀಡುವ ದೂರದರ್ಶನ ಇಂದು ಕೇವಲ ಮನೋರಂಜನೆಗೆ ಸೀಮಿತವಾಗಿದೆ ಎಂದವರು ಖೇದ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳೇ ರಚಿಸಿದ ಇ - ಪತ್ರಿಕೆ `ವಿದ್ಯಾದರ್ಪಣ.ಬ್ಲಾಗ್ ಸ್ಪಾಟ್ . ಕಾಮ್.'ನ್ನು ವಿದ್ಯಾದಾಯಿನಿ ಸಂಘದ ಅಧ್ಯಕ್ಷರಾದ ಎಂ.ಎಸ್.ಕೃಷ್ಣ ಭಟ್ ಅನಾವರಣಗೊಳಿಸಿದರು. ಕಾಲೇಜಿನ ಪ್ರಾಂಶುಪಾಲ ರಾಜ್ ಮೋಹನ್ ರಾವ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಾಧ್ಯಮ ಮತ್ತು ನೀತಿಸಂಹಿತೆ ಕುರಿತು ವರದೇಶ್ ಹಿರೇಗಂಗೆ ವಿಶೇಷ ಉಪನ್ಯಾಸ ನೀಡಿದರು. ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಅಕ್ಷತಾ ಭಟ್ ಸಿ.ಎಚ್. ಸ್ವಾಗತಿಸಿದರು. ಉಪನ್ಯಾಸಕ ಹರೀಶ್ ಕೆ.ಆದೂರು ವಂದಿಸಿದರು.
ಇದೇ ಸಂದರ್ಭದಲ್ಲಿ ಅಪೂರ್ವ ತಾಳೆಗರಿ ಹಾಗೂ ಹಳೆಯ ಪತ್ರಿಕೆಗಳ ಪ್ರದರ್ಶನ ನಡೆಯಿತು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳೇ ರಚಿಸಿದ ಇ - ಪತ್ರಿಕೆ `ವಿದ್ಯಾದರ್ಪಣ.ಬ್ಲಾಗ್ ಸ್ಪಾಟ್ . ಕಾಮ್.'ನ್ನು ವಿದ್ಯಾದಾಯಿನಿ ಸಂಘದ ಅಧ್ಯಕ್ಷರಾದ ಎಂ.ಎಸ್.ಕೃಷ್ಣ ಭಟ್ ಅನಾವರಣಗೊಳಿಸಿದರು. ಕಾಲೇಜಿನ ಪ್ರಾಂಶುಪಾಲ ರಾಜ್ ಮೋಹನ್ ರಾವ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಾಧ್ಯಮ ಮತ್ತು ನೀತಿಸಂಹಿತೆ ಕುರಿತು ವರದೇಶ್ ಹಿರೇಗಂಗೆ ವಿಶೇಷ ಉಪನ್ಯಾಸ ನೀಡಿದರು. ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಅಕ್ಷತಾ ಭಟ್ ಸಿ.ಎಚ್. ಸ್ವಾಗತಿಸಿದರು. ಉಪನ್ಯಾಸಕ ಹರೀಶ್ ಕೆ.ಆದೂರು ವಂದಿಸಿದರು.
ಇದೇ ಸಂದರ್ಭದಲ್ಲಿ ಅಪೂರ್ವ ತಾಳೆಗರಿ ಹಾಗೂ ಹಳೆಯ ಪತ್ರಿಕೆಗಳ ಪ್ರದರ್ಶನ ನಡೆಯಿತು.
No comments:
Post a Comment